*ಕೃಷ್ಣೆಯ ಜಲದಿಗೆ ಸಿಎಂ, ಡಿಸಿಎಂ ಬಾಗಿನ ಅರ್ಪಣೆ

*ಕೃಷ್ಣೆಯ ಜಲದಿಗೆ ಸಿಎಂ, ಡಿಸಿಎಂ ಬಾಗಿನ ಅರ್ಪಣೆ


ಬಾಗಲಕೋಟೆ :ಆಲಮಟ್ಟಿಯ ಲಾಲಬಹದ್ದೂರ ಶಾಸ್ತ್ರೀ ಸಾಗರದಲ್ಲಿ ಕೃಷ್ಣೆಯ ಜಲದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ  ಶನಿವಾರ ಗಂಗಾಪೂಜೆ ನೆರವೇರಿಸುವ ಮೂಲಕ ಬಾಗಿನ ಅರ್ಪಿಸಿದರು.


           ಕಾರ್ಯಕ್ರಮದಲ್ಲಿ  ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ,  ಬಾಗಾಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ, ಸಚಿವರಾದ ಶಿವಾನಂದ ಪಾಟೀಲ, ಬೀಳಗಿ ಶಾಸಕರು ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ, ಹುನಗುಂದ ಶಾಸಕ ಹಾಗೂ ರಾಜ್ಯ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಶಾಸಕರು ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ, ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಸೇರಿದಂತೆ ಜಿಲ್ಲೆಯ ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಶಾಸಕರು ಹಾಗೂ ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ, ಸಿಇಓ ಶಶಿಧರ ಕುರೇರ, ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಹಾಗೂ ಇತರ ಗಣ್ಯಮಾನ್ಯರು ಉಪಸ್ಥಿತಿತರಿದ್ದರು.