೬ ರಂದು ಕೃಷ್ಣೆಯ ಜಲದಿಗೆ ಸಿಎಂ ಬಾಗಿನ ಅರ್ಪಣೆ 

೬ ರಂದು ಕೃಷ್ಣೆಯ ಜಲದಿಗೆ ಸಿಎಂ ಬಾಗಿನ ಅರ್ಪಣೆ 

೬ ರಂದು ಕೃಷ್ಣೆಯ ಜಲದಿಗೆ ಸಿಎಂ ಬಾಗಿನ ಅರ್ಪಣೆ

ಬಾಗಲಕೋಟೆ :

ಆಲಮಟ್ಟಿ ಆಣೆಕಟ್ಟಿನಲ್ಲಿ ಗರಿಷ್ಟ ಮಟ್ಟಕ್ಕೆ ನೀರು ಸಂಗ್ರಹಣೆಯಾದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ ೬ ರಂದು ಬೆಳಿಗ್ಗೆ ೧೧ ಗಂಟೆಗೆ ಆಲಮಟ್ಟಿಯ ಲಾಲ್ ಬಹದ್ದೂರ ಶಾಸ್ತಿçà ಸಾಗರದ ಕೃಷ್ಣೆ ಜಲದಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಣೆ ಸಲ್ಲಿಸಲಿದ್ದಾರೆ.

 ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಮತ್ತು ನಗರಾಭಿವೃದ್ದಿ ಸಚಿವ ಡಿ.ಕೆ.ಶಿವಕುಮಾರ ಘನ ಉಪಸ್ಥಿತರಿರುವರು. ಅಧ್ಯಕ್ಷತೆಯನ್ನು ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ, ಗೌರವ ಉಪಸ್ಥಿತಿಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ.ಎಂ.ಬಿ.ಪಾಟೀಲ, ಅಬಕಾರಿ ಸಚಿವರ ಆರ್.ಬಿ.ತಿಮ್ಮಾಪೂರ ವಹಿಸಲಿದ್ದಾರೆ. 
ಮುಖ್ಯ ಅತಿಥಿಗಳಾಗಿ ವಿಜಯಪುರ ಜಿಲ್ಲೆಗೆ ಸಂಬAಧಿಸಿದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ ಎನ್, ವಿಧಾನ ಪರಿಷತ್ ಶಾಸಕ ಪ್ರಕಾಶ ಹುಕ್ಕೇರಿ, ಮುದ್ದೇಬಿಹಾಳ ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಅಪ್ಪಾಜಿ ನಾಡಗೌಡ, ಸಂಸದ ರಮೇಶ ಜಿಗಜಿನ್ನಿ, ರಾಜ್ಯ ಸಭಾ ಸದಸ್ಯೆ ಡಾ.ಸುಧಾ ಮೂರ್ತಿ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಇತರೆ ಗಣ್ಯಮಾನ್ಯರು ಆಗಮಿಸಲಿದ್ದಾರೆ.
ಬಾಗಲಕೋಟೆ ಜಿಲ್ಲೆಗೆ ಸಂಬAಧಿಸಿದ ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ, ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ, ಹುನಗುಂದ ಶಾಸಕ ಹಾಗೂ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಸಂಸದ ಪಿ.ಸಿ.ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಸೇರಿದಂತೆ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಇತರೆ ಗಣ್ಯಮಾನ್ಯರು ಆಗಮಿಸಲಿದ್ದಾರೆ. 
ಅಲ್ಲದೇ ಜಲಸಂಪನ್ಮೂಲ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಸರಕಾರದ ಕಾರ್ಯದರ್ಶಿ ಕೃಷ್ಣಮೂರ್ತಿ ಕುಲಕರ್ಣಿ, ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ಮೊಹನರಾಜ್, ಮುಖ್ಯ ಇಂಜಿನೀಯರ್ ಬಸವರಾಜ್ ಡಿ. ಭಾಗವಹಿಸಲಿದ್ದಾರೆ.