ಮ್ಯಾರಥಾನ್ ಸ್ಪರ್ಧೆಗೆ ಸಿಇಓ ಕುರೇರ್ ಚಾಲನೆ

ಮ್ಯಾರಥಾನ್ ಸ್ಪರ್ಧೆಗೆ ಸಿಇಓ ಕುರೇರ್ ಚಾಲನೆ

*ಎಚ್.ಐವಿ, ಏಡ್ಸ್ ಜಾಗೃತಿಗಾಗಿ ಐಇಸಿ ಪ್ರಚಾರಾಂದೋಲನ-2025*

*ಮ್ಯಾರಥಾನ್ ಸ್ಪರ್ಧೆಗೆ ಸಿಇಓ ಕುರೇರ್ ಚಾಲನೆ
ಬಾಗಲಕೋಟೆ : ಎಚ್.ಐವಿ, ಏಡ್ಸ್ ಜಾಗೃತಿಗಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ 5 ಕಿ.ಮೀ ಮ್ಯಾರಥಾನ್ ಸ್ಪರ್ಧೆಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಶನಿವಾರ ಚಾಲನೆ ನೀಡಿದರು.
            ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ರಾಜ್ಯ ಏಡ್ಸ್ ಪ್ರವೆನ್‍ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಮ ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ ಹಾಗೂ ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಮ್ಯಾರಥಾನ್ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಅವರು ಎಚ್.ಐ.ವಿ ತಡೆಗಟ್ಟಲು ತೀವ್ರಗೊಳಿಸಿದ ಐಇಸಿ ಪ್ರಚಾರಾಂದೋಲನ-2025ರ ಅಂಗವಾಗಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.


            ಮುಖ್ಯವಾಗಿ ಎಚ್.ಐ.ವಿ, ಏಡ್ಸ್ ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ಎಚ್.ಐ.ವಿ, ಏಡ್ಸ್ ತಡೆ ಕಾಯ್ದೆ-2017, ನ್ಯಾಕೋ ಏಡ್ಸ್ ಆಪ್, ಉಚಿತ ರಾಷ್ಟ್ರೀಯ ಸಹಾಯವಾಣಿ-1097 ಸೇರಿದಂತೆ ಇತರೆ ಮಾಹಿತಿಗಳ ಬಗ್ಗೆ ಕಾಲೇಜು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶವಾಗಿದೆ ಎಂದು ತಿಳಿಸಿದರು. 
            ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ ಡಿ, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಸುವರ್ಣ ಕುಲಕರ್ಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಕಲಾ ಶಿನ್ನೂರ, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಡಿ.ಜಿ.ಹೊಸಳ್ಳಿ ಸೇರಿದಂತೆ ಏಡ್ಸ್ ನಿಯಂತ್ರಣ ಘಟಕ ಸಿಬ್ಬಂದಿ ವರ್ಗದವರು ಇದ್ದರು.
           5 ಕಿ.ಮೀ ಮ್ಯಾರಥಾನ್ ಸ್ಪರ್ಧೆ ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ಎ.ಪಿ.ಎಂ.ಸಿ, ಬಜಾಜ್ ಶೋರೂಮ್ ಮೂಲಕ ಮರಳಿ ಜಿಲ್ಲಾಡಳಿತ ಭವನಕ್ಕೆ ಮುಕ್ತಾಯಗೊಂಡಿತು. ಮ್ಯಾರಥಾನ್ ಸ್ಪರ್ಧೆಯಲ್ಲಿ 220ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪುರುಷರ ವಿಭಾಗದಲ್ಲಿ ಸಂಗಮೇಶ ಹಳ್ಳಿ (ಪ್ರಥಮ), ದರ್ಶನ ಗೌಡರ (ದ್ವಿತೀಯ), ಮಂಜುನಾಥ ಬೇಲೂರಪ್ಪನವರ (ತೃತೀಯ) ಸ್ಥಾನ ಪಡೆದುಕೊಂಡರೆ, ಮಹಿಳಾ ವಿಭಾಗದಲ್ಲಿ ಮಹಾಲಕ್ಷ್ಮೀ ಬಸಕಾಳಿ (ಪ್ರಥಮ), ಮೀನಾಕ್ಷಿ ಚಲವನ್ನವರ (ದ್ವಿತೀಯ), ದೀಪಾ ಸನದಿ (ತೃತೀಯ) ಸ್ಥಾನ ಪಡೆದುಕೊಂಡರು. ವಿಜೇತರಾದವರಿಗೆ ತಲಾ ಪ್ರಥಮ 5 ಸಾವಿರ ರೂ, ದ್ವಿತೀಯ 3500 ರೂ, ತೃತೀಯ 2500 ರೂ.ಗಳ ನಗದು, ಪ್ರಶಸ್ತಿ ಪತ್ರ ಹಾಗೂ ಮೆಡಲ್ ನೀಡಲಾಯಿತು.