ಕೋವಿಡ್ ಸೋಂಕಿತರು ಹೆಚ್ಚಳ ಹಿನ್ನೆಲೆ: ಬೆಡ್ಗಳ ಹೆಚ್ಚಳಕ್ಕೆ ಕಳಸದ ಸೂಚನೆ
ಕೋವಿಡ್ ಸೋಂಕಿತರು ಹೆಚ್ಚಳ ಹಿನ್ನೆಲೆ: ಬೆಡ್ಗಳ ಹೆಚ್ಚಳಕ್ಕೆ ಕಳಸದ ಸೂಚನೆ ಕೋವಿಡ್ ರೋಗಿಗಳ ಸಂಖ್ಯೆಗೆ ಅನುಗುಣವಾಗಿ ಚಿಕಿತ್ಸೆಗೆ ತೊಂದರೆಯಾಗದAತೆ ಮುನ್ನಚ್ಚರಿಕೆಯಾಗಿ ಬೆಡ್ಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶಿವಯೋಗಿ ಕಳಸದ ಅಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್ ಸೋಂಕಿತರು ಹೆಚ್ಚಳ ಹಿನ್ನೆಲೆ: ಬೆಡ್ಗಳ ಹೆಚ್ಚಳಕ್ಕೆ ಕಳಸದ ಸೂಚನೆ
ನಾಡನುಡಿ ನ್ಯೂಸ್
ಬಾಗಲಕೋಟೆ ಜು.೯:
ಕೋವಿಡ್ ರೋಗಿಗಳ ಸಂಖ್ಯೆಗೆ ಅನುಗುಣವಾಗಿ ಚಿಕಿತ್ಸೆಗೆ ತೊಂದರೆಯಾಗದAತೆ ಮುನ್ನಚ್ಚರಿಕೆಯಾಗಿ ಬೆಡ್ಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶಿವಯೋಗಿ ಕಳಸದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಜರುಗಿದ ಕೋವಿಡ್ ನಿಯಂತ್ರಣ ಕುರಿತು ಕೈಗೊಂಡ ಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಎಲ್ಲ ತಾಲೂಕಾ ಆಸ್ಪತ್ರೆಗಳಲ್ಲಿ ಬೆಡ್ಗಳನ್ನು ಸಿದ್ದಪಡಿಸಿಕೊಂಡು ಬೇಕಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಎಲ್ಲ ತಾಲೂಕಾ ಆರೋಗ್ಯ ಕೇಂದ್ರಗಳಲ್ಲಿ ಬೆಡ್ ವ್ಯವಸ್ಥೆಯ ಜೊತೆಗೆ ಅಂಬುಲೆನ್ಸ್ಗಳನ್ನು ಸೂಸ್ಥಿತಿಯಲ್ಲಿ ಇಟ್ಟುಕೊಳ್ಳಲು ತಿಳಿಸಿದರು. ಇದರ ಜೊತೆಗೆ ಚಿಕಿತ್ಸೆಗೆ ಬೇಕಾದ ಔಷಧ, ಪಿಪಿಇ ಕಿಟ್, ತ್ರಿಪಲ್ಏರ್, ಎನ್-೯೫ ಮಾಸ್ಕಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಐ.ಸಿಯು ಗಳನ್ನು ಸಹ ರೆಡಿಯಾಗಿ ಇಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಸೋಂಕಿತರನ್ನು ಗುಣಪಡಿಸುವಲ್ಲಿ ಶ್ರಮಿಸುತ್ತಿರುವ ವೈದ್ಯರ ಶ್ರಮವನ್ನು ಶ್ಲಾಘಿಸಿದರು.
ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಮಾತನಾಡಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ೨೫೭ ಬೆಡ್ನಿಂದ ೩೦೦ಕ್ಕೆ ಹೆಚ್ಚಿಸಲಾಗುತ್ತಿದೆ. ಕುಮಾರೇಶ್ವರ ಆಸ್ಪತ್ರೆಯಲ್ಲಿ ೨೦೦ ಬೆಡ್ಗಳು ರೆಡಿ ಇರುವುದಾಗಿ ತಿಳಿಸಿದರು. ಪೆಸೆಂಟಗಳ ಸಂಖ್ಯೆ ಹೆಚ್ಚಾದಲ್ಲಿ ನವನಗರದ ಅಲ್ಪಸಂಖ್ಯಾತರ ವಸತಿ ನಿಲಯದಲ್ಲಿ ೧೦೦ ಬೆಡ್ಗಳನ್ನು ಸಿದ್ದಪಡಿಕೊಳ್ಳಲಾಗುತ್ತಿದೆ. ಜಮಖಂಡಿ ಉಪವಿಭಾಗದ ವ್ಯಾಪ್ತಿಯಲ್ಲಿ ೩೦೦ ಬೆಡ್, ಇಲಕಲ್ಲ ತಾಲೂಕಾ ಆಸ್ಪತ್ರೆ, ಬಾದಾಮಿ ಚಿಕ್ಕ ಮುಚ್ಚಳಗುಡ್ಡದಲ್ಲಿ ಹೆಚ್ಚುವರಿ ಬೆಡ್ಗಳನ್ನು ಸಿದ್ದಪಡಿಸಿಕೊಳ್ಳಲಾಗುವುದೆಂದು ತಿಳಿಸಿದರು. ಕೋವಿಡ್ನಿಂದ ಮೃತಪಟ್ಟವರನ್ನು ನಿಯಮಾವಳಿ ಪ್ರಕಾರ ಶವಸಂಸ್ಕಾರ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ ಮಾತನಾಡಿ ಚಿಕಿತ್ಸೆಗೆ ಬೇಕಾದ ಔಷಧ ಹಾಗೂ ಎಲ್ಲ ರೀತಿಯ ಸಲಕರಣೆಗಳನ್ನು ಲಭ್ಯವಿದ್ದು, ಸಾಂಸ್ಥಿಕ ಕ್ವಾರಂಟೈನ್ನಲ್ಲಿ ೧೯೯೭ ಜನ ಇದ್ದಾರೆ. ಇಲ್ಲಿಯವರೆಗೆ ಒಟ್ಟು ೧೬೦೧೬ ಸ್ಯಾಂಪಲ್ಗಳನ್ನು ಕಳುಹಿಸಲಾಗಿದ್ದು, ಈ ಪೈಕಿ ೧೪೦೪೬ ನೆಗಟಿವ್ ಪ್ರಕರಣ, ೩೪೯ ಪಾಜಿಟಿವ್ ಪ್ರಕರಣ, ೮ ಮೃತ ಪ್ರಕರಣ ವರದಿಯಾಗಿರುವುದಾಗಿ ತಿಳಿಸಿದರು. ಹೆಚ್ಚಾಗಿ ೨೦ ರಿಂದ ೪೦ ವಯಸ್ಸಿಯನವರಲ್ಲಿ ಕೋವಿಡ್ ಪ್ರಕರಣಗಳು ಕಂಡುಬAದಿವೆ. ೬೦ ವರ್ಷದ ಮೇಲ್ಪಟ್ಟವರಲ್ಲಿ ಕೇವಲ ೧೯ ಪ್ರಕರಣಗಳು ಮಾತ್ರ ಕಂಡುಬAದಿವೆ. ಜಿಲ್ಲೆಯಲ್ಲಿ ಕೋವಿಡ್ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಜಿಲ್ಲಾ ಆಸ್ಪತ್ರೆಯ ಶಸ್ತç ಚಿಕಿತ್ಸಕರಾದ ಡಾ.ಪ್ರಕಾಶ ಬಿರಾದಾರ ಮಾತನಾಡಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಹಾಗೂ ಅವರಿ ದಿನನಿತ್ಯ ನೀಡುತ್ತಿರುವ ಆಹಾರ ಪದ್ದತಿಯ ಬಗ್ಗೆ ವಿವರವಾಗಿ ಸಭೆಗೆ ತಿಳಿಸಿದರು. ಜಿಲ್ಲಾ ಆಸ್ಪತ್ರೆಯಲ್ಲಿ ೯ ವೆಂಟಿಲೇಟರ, ೨೩ ಐ.ಸಿ.ಯು ಬೆಡ್ಗಳಿವೆ. ಸದ್ಯ ಜಿಲ್ಲಾ ಆಸ್ಪತ್ರೆಯಲ್ಲಿ ೧೯೧ ಕೋವಿಡ್ ಪಾಜಿಟಿವ್ ಇರುವ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ ಕೋಮೋರಬಿಡ್ ಕಂಡಿಷನದಲ್ಲಿ ೨೦ ಪೆಸೆಂಟ್ ಮಾತ್ರ ಕಂಡುಬAದಿವೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಯಶವಂತ ಗೋರಕಾರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿಗಳಾದ ಎಂ.ಗAಗಪ್ಪ, ಸಿದ್ದು ಹುಳ್ಳೊಳ್ಳಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


