ಜನವರಿ ೧೯ ರಿಂದ ರಾಷ್ಟಿçÃಯ ಚಾಲುಕ್ಯ ಉತ್ಸವ : ಡಿಸಿ

ಜನವರಿ ೧೯ ರಿಂದ ರಾಷ್ಟಿçÃಯ ಚಾಲುಕ್ಯ ಉತ್ಸವ : ಡಿಸಿ
ಬಾಗಲಕೋಟೆ:
 ಚಾಲುಕ್ಯರ ಗತವೈಭವವನ್ನು ಸಾರುವ ಚಾಲುಕ್ಯ ಉತ್ಸವವನ್ನು ಇದೇ ಜನವರಿ ೧೯ ರಿಂದ ೨೧ ವರೆಗೆ ಮೂರು ದಿನಗಳ ಕಾಲ ವಿಜೃಂಭನೆಯಿAದ ಆಚರಿಸಲು ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು. 
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಚಾಲುಕ್ಯ ಉತ್ಸವ-೨೦೨೫ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜನವರಿ ೧೯ ರಂದು ಬಾದಾಮಿ, ೨೦ ರಂದು ಪಟ್ಟದಕಲ್ಲ ಹಾಗೂ ೨೧ ರಂದು ಐಹೊಳೆಯಲ್ಲಿ ಉತ್ಸವ ನಡೆಯಲಿದೆ. ಸಮಯಾವಕಾಶ ಕಡಿಮೆ ಇರುವದರಿಂದ ಎಲ್ಲ ಸಿದ್ದತೆಗಳನ್ನು ಕೈಗೊಳ್ಳುವಂತೆ ವಿವಿಧ ಸಮಿತಿಯವರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಜನವರಿ ೧೨ ರಂದು ಮಧ್ಯಾಹ್ನ ೩ ಗಂಟೆಗೆ ಬಾದಾಮಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಿದ್ದತೆ ಕುರಿತು ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಮೂರು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಭಾಗವಹಿಸುವ ಕಲಾವಿದರ ಪಟ್ಟಿಯನ್ನು ಅಂತಿಮಗೊಳಿಸಿ ಆಮಂತ್ರ ಪತ್ರಿಕೆ ಸಿದ್ದಪಡಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು ಬಾದಾಮಿ, ಪಟ್ಟದಕಲ್ಲ ಹಾಗೂ ಐಹೊಳೆಯಲ್ಲಿ ಉತ್ಸವದ ವೇದಿಕೆ ಸಿದ್ದತೆಗೆ ಸಂಬAಧಿಸಿದ ಅಧಿಕಾರಿಗಳು ಬರದಿಂದ ಸಿದ್ದತೆ ಕೈಗೊಳ್ಳಬೇಕು. ಇಂದಿನಿAದಲೇ ಸ್ಮಾರಕಗಳ ಸುತ್ತ ಮುತ್ತ ಸ್ವಚ್ಛತೆ ಕಾರ್ಯ ನಡೆಸಿ ರಸ್ತೆಗಳಲ್ಲಿ ತಗ್ಗು, ಗುಂಡಿಗಳಿದ್ದಲ್ಲಿ ಅವುಗಳನ್ನು ಮುಚ್ಚಿಸುವ ಕೆಲಸವಾಗಬೇಕು ತಿಳಿಸಿದರು. ಪಟ್ಟದಕಲ್ಲ ಹಾಗೂ ಐಹೊಳೆಯಲ್ಲಿ ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು ಗ್ರಾಮ ಸ್ವಚ್ಛತೆಗೆ ಕಾರ್ಯ ಪ್ರಾರಂAಭಿಸಲು ಜಿ.ಪಂ ಸಿಇಓ ತಿಳಿಸಿದರು.
ಉತ್ಸವ ನಡೆಯುವ ಮೂರು ಸ್ಥಳಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ, ಕಲಾವಿದರನ್ನು ವೇದಿಕೆಗೆ ಕರೆತರಲು ವಾಹನಗಳ ವ್ಯವಸ್ಥೆ, ವಸತಿ ಹಾಗೂ ಊಟದ ವ್ಯವಸ್ಥೆಗೆ ಕ್ರಮಕೈಗೊಳ್ಳಲು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಹೋಟೆಲ್, ಸಮುದಾಯ ಭವನ, ವಸತಿ ನಿಲಯಗಳನ್ನು ಗುರುತಿಸಿ ಪಟ್ಟಿ ಮಾಡಿಕೊಳ್ಳಲು ತಿಳಿಸಿದರು. ಸ್ಥಬ್ದಚಿತ್ರ ತಯಾರಿ ಅಂತಿಮಗೊಳಿಸಿ ಜಿಲ್ಲೆಯಲ್ಲಿ ಸಂಚರಿಸಲು ಕ್ರಮಕೈಗೊಳ್ಳಬೇಕು. ಉತ್ಸವದ ಮುನ್ನಾದಿನ ಗ್ರಾಮೀಣ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕುಸ್ತಿ, ಸಂಗ್ರಾನಿ ಕಲ್ಲು ಎತ್ತುವ ಸ್ಪರ್ಧೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಜಿ.ಪಂ ಸಿಇಓ ಶಶಿಧರ ಕುರೇರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ ಉತ್ಸವಕ್ಕೆ ಸಂಬAಧಿಸಿದ ವಿವಿಧ ಸಮಿತಿಯ ಅಧಿಕಾರಿಗಳು ಹಾಗೂ ಅಧಿಕಾರೇತರ ಸದಸ್ಯರು ಉಪಸ್ಥಿತರಿದ್ದರು.