ಅನಧಿಕೃತ ಧಾರ್ಮಿಕ ಕಟ್ಟಡಗಳ ಬಗ್ಗೆ ಶೀಘ್ರದಲ್ಲಿ ಪರಿಶೀಲನೆ : ಡಿಸಿ 

ಅನಧಿಕೃತ ಧಾರ್ಮಿಕ ಕಟ್ಟಡಗಳ ಬಗ್ಗೆ ಶೀಘ್ರದಲ್ಲಿ ಪರಿಶೀಲನೆ : ಡಿಸಿ 


ಬಾಗಲಕೋಟೆ: ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಂಡು ಹೋಗಲು ಅನಧಿಕೃತ ಧಾರ್ಮಿಕ ಕಟ್ಟಡಗಳ ಬಗ್ಗೆ ಮಾಹಿತಿ ಪಡೆದುಕೊಂಡು ಶೀಘ್ರದಲ್ಲಿಯೇ ಸೂಕ್ತ ಪರಿಶೀಲನೆ ನಡೆಸಲಾಗುವುದೆಂದು ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ತಿಳಿಸಿದರು.
 ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಸೋಮವಾರ ಜರುಗಿದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಲಯ ನಿಯಮಾವಳಿ, ಸುಪ್ರೀಂ ಕೋರ್ಟ ಆದೇಶ, ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ನಿಯಮಾವಳಿ ಹಾಗೂ ಠರಾವು ಪ್ರತಿಗಳು ಇದ್ದರೆ ಮಾತ್ರ ನಿರ್ಧಾರ ಕೈಗೊಳ್ಳಲು ಸಾಧ್ಯವಾಗುತ್ತದೆ. ಪ್ರಸ್ತುತ ಲಭ್ಯವಿರುವ ಮಾಹಿತಿ, ಬೈಲಾದಲ್ಲಿರುವ ನಿಯಮಾವಳಿಗಳನ್ನು ಪರಿಶೀಲಿಸಿ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆಯಲು ಸಂಬAಧಪಟ್ಟ ವಲಯ ಯೋಜನೆಯ ಅಧಿಕಾರಿಗಳು ಇಲ್ಲ. ಮಾಹಿತಿ ಪಡೆದು ಮುಂದಿನ ಕ್ರಮಕೈಗೊಳ್ಳಲಾಗುವುದೆಂದು ತಿಳಿಸಿದರು.


 ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಸಂಬAಧಿಸಿದAತೆ ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಮಾಹಿತಿ ಪಡೆದುಕೊಳ್ಳಲಾಗುತ್ತದೆ. ಯಾವುದೇ ರೀತಿಯಲ್ಲಿ ಶಾಂತಿ ಕದಡುವ ಕೆಲಸ ಆಗಬಾರದು. ಪ್ರಸ್ತುತ ನಿಯಮಾವಳಿಯ ಪ್ರಕಾರ ಕಾನೂನು ಬದ್ಧವಾಗಿದ್ದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸಂಬAಧಿಸಿದ ಬಿಟಿಡಿಎ, ನಗರಸಭೆ, ವಲಯ ಯೋಜನಾ ಅಧಿಕಾರಿಗಳ ಸಭೆ ಕರೆದು ಸೂಕ್ತ ಮಾಹಿತಿ ಪಡೆದುಕೊಳ್ಳಲಾಗುವುದು. ಇದು ಒಂದೇ ದಿನದಲ್ಲಿ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. ಮಾಹಿತಿ ಪಡೆದುಕೊಂಡು ಕಾನೂನಿನ ಪ್ರಕಾರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದೆಂದರು.
 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾತನಾಡಿ, ಅನಧಿಕೃತ ಧಾರ್ಮಿಕ ಕಟ್ಟಡದ ಬಗ್ಗೆ ಬಿಟಿಡಿಎ ಮತ್ತು ನಗರಸಭೆಯಿಂದ ಮಾಹಿತಿ ಪಡೆಯಲಾಗುತ್ತದೆ. ಮಾಹಿತಿ ನೀಡಲು ಎಷ್ಟು ಸಮಯ ಬೇಕಾಗುವುದೆಂಬುದನ್ನು ಅಧಿಕಾರಿಗಳಿಂದ ತಿಳಿದು ನಾಗರಿಕರನ್ನು ಮತ್ತೊಮ್ಮೆ ಸಭೆ ಕರೆದು ಸೂಕ್ತ ನಿರ್ಧಾರಕ್ಕೆ ಬರಲಾಗುತ್ತದೆ. ಜನರ ಭಾವನೆಗಳಿಗೆ ಧಕ್ಕೆ ಬರದ ರೀತಿಯಲ್ಲಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಕಾರ್ಯ ಮಾಡಲಾಗುತ್ತದೆ ಎಂದು ತಿಳಿಸಿದರು. 
 ಈ ಸಂದರ್ಭದಲ್ಲಿ ಮಾತನಾಡಿದ ನಾಗರಿಕರು ಹಳೆ ಬಾಗಲಕೋಟೆ ಮುಳುಗಡೆಯಾದ ನಂತರ ಪುನರ್ವಸತಿ ಕಲ್ಪಿಸಲು ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರ ಹುಟ್ಟಿದೆ. ಹಳೆಯ ಬಾಗಲಕೋಟೆಯಲ್ಲಿ ಧಾರ್ಮಿಕ ಕಟ್ಟಡಗಳು ಎಷ್ಟು ಇದ್ದವು ನವನಗರದಲ್ಲಿ ಎಷ್ಟು ನಿರ್ಮಾಣವಾಗಿವೆ ಎಂಬುದನ್ನು ಅಧಿಕಾರಿಗಳು ಮಾಹಿತಿ ನೀಡಬೇಕಿದೆ. ಅನಧಿಕೃತ ಇದ್ದದ್ದು ಅಧಿಕೃತವಾಗಬೇಕು ಎಂದು ಎ.ಎ.ದಂಡಿಯಾ ಹೇಳಿದರೆ, ವಕೀಲ ಚಂದ್ರಶೇಖರ ರಾಠೋಡ ಮಾತನಾಡಿ,  ಹಳೆಯ ಬಾಗಲಕೋಟೆಯಲ್ಲಿ ಎಷ್ಟು ಧಾರ್ಮಿಕ ಸ್ಥಳಗಳು ಮುಳುಗಡೆಯಾಗಿವೆ. ಎಷ್ಟಕ್ಕೆ ಜಾಗೆ ಕೊಟ್ಟಿದ್ದು, ಯಾವುದಕ್ಕೆ ಕೊಟ್ಟಿಲ್ಲ, ಅನಧಿಕೃತ ಕಟ್ಟಡಗಳು ಎಷ್ಟು ಇವೆ. ಇದಕ್ಕೆ ಬಿಡಿಟಿಎ ಅಧಿಕಾರಿಗಳು ಸೂಕ್ತ ಮಾಹಿತಿ ನೀಡಬೇಕೆಂದು ಕೇಳಿದರು.  
  ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರಸನ್ನ ದೇಸಾಯಿ, ಮಹಾಂತೇಶ್ವರ ಜಿದ್ದಿ, ಡಿವೈಎಸ್‌ಪಿ ಗಜಾನನ ಸುತಾರ ಸೇರಿದಂತೆ ವಿವಿಧ ಸಮುದಾಯದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.